ಬಾಲ್ಯ ವಿವಾಹ ಮುಕ್ತ ಸಮಾಜ: ಸುಭದ್ರ ಭವಿಷ್ಯದ ದಿಕ್ಸೂಚಿ
ದಿನಾಂಕ: 22-12-2025 | ಸ್ಥಳ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಶೇನಟ್ಟಿ. ಬಾಲ್ಯ ವಿವಾಹ ಮಕ್ಕಳ ಭವಿಷ್ಯಕ್ಕೆ ಕೊಳ್ಳಿ ಇಡುವ ಸಾಮಾಜಿಕ ಪಿಡುಗು. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಶೇನಟ್ಟಿ ಯಲ್ಲಿ "ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನ" ವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ, ಶಾಲಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು "ಬಾಲ್ಯ ವಿವಾಹವನ್ನು ಬೆಂಬಲಿಸುವುದಿಲ್ಲ" ಎಂದು ಪ್ರತಿಜ್ಞೆ ಮಾಡಿದರು. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪ್ರತಿಜ್ಞೆ ಸ್ವೀಕರಿಸುತ್ತಿರುವುದು ಜಾಗೃತಿ ಮತ್ತು ಸಂದೇಶ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಕೆ ಬಿ ತಾಯಣ್ಣವರ ಅವರು ಕಾರ್ಯಕ್ರಮ ಉದ್ಘಾಟಿಸಿ, "ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಬಾಲ್ಯ ವಿವಾಹದಿಂದ ಅವರ ಆರೋಗ್ಯ ಮತ್ತು ಭವಿಷ್ಯಕ್ಕೆ ಧಕ್ಕೆಯಾಗುತ್ತದೆ. ನಮ್ಮ ಗ್ರಾಮವನ್ನು ಬಾಲ್ಯ ವಿವಾಹ ಮುಕ್ತ ಗ್ರಾಮವನ್ನಾಗಿ ಮಾಡೋಣ" ಬಾಲ್ಯ ವಿವಾಹ ಮುಕ್ತ ಸಮಾಜ; ಸುಭದ್ರ ಭವಿಷ್ಯದ ದಿಕ್ಸೂಚಿ ಎಂದು ಕರೆ ನೀಡಿದರು. ವಿದ್ಯಾರ್ಥಿಗಳು "ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ", "ಓದಲಿ ಹೆಣ್ಣು ಮಗು" ಎಂಬ ಘೋಷಣೆ ಕೂಗಿದರು. ಕಾನೂನು ಅರಿವು ಮತ್ತು ಪ್ರತಿಜ್ಞೆ ಶಾಲೆ ಶಿಕ್ಷಕರರಾದ ಶ್ರೀ ಶಿವಾನಂದ ಲೋಕಪ್ಪನವರ ಅವರು ಬಾಲ್ಯ ವಿವಾಹ ನಿಷೇಧ ಕಾಯ್ದೆ-2006...